Posts

ನಾನು ಹೆದರುವುದಿಲ್ಲ, ಸತ್ಯವನ್ನೇ ಮಾತನಾಡುತ್ತೇನೆ.- ನಟ ಶಿವರಾಜ್ ಕುಮಾರ್

Image
  ನಾನು ಹೆದರುವುದಿಲ್ಲ, ಸತ್ಯವನ್ನೇ ಮಾತನಾಡುತ್ತೇನೆ.- ನಟ ಶಿವರಾಜ್ ಕುಮಾರ್ ನಾನು ಯಾವುದಕ್ಕೂ ಹೆದರುವುದಿಲ್ಲ, ಸತ್ಯವನ್ನೇ ಮಾತನಾಡುತ್ತೇನೆ.- ನಟ ಶಿವರಾಜ್ ಕುಮಾರ್ ಅವರು ಮಾಧ್ಯಮಗಳ ವರ್ತನೆ ಕುರಿತು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಚಿತ್ರರಂಗದಲ್ಲಿ ಯಾವುದೇ ವಿವಾದ ಅಥವಾ ಸಮಸ್ಯೆ ಉದ್ಭವಿಸಿದಾಗ ತಮ್ಮನ್ನೇ ಪ್ರಶ್ನಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಎಲ್ಲ ವಿಷಯಗಳಿಗೂ ನನ್ನನ್ನೇ ಯಾಕೆ ಟಾರ್ಗೆಟ್ ಮಾಡ್ತೀರಾ ಎಂದು ಪ್ರಶ್ನಿಸಿದ್ದಾರೆ. ತೆಲುಗಿನ ಬಹು ನಿರೀಕ್ಷಿತ ''ಪೆದ್ದಿ'' ಚಿತ್ರದಲ್ಲಿ ನಟಿಸಿರುವ ಶಿವರಾಜ್‌ಕುಮಾರ್, ಚಿತ್ರದ ಪ್ರಚಾರದ ಅಂಗವಾಗಿ ನೀಡಿದ ಸಂದರ್ಶನವೊಂದರಲ್ಲಿ ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ, ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಪ್ಯಾನ್ ಇಂಡಿಯಾ ಸಿನಿಮಾಗಳ ಯುಗದಲ್ಲಿ ಎಲ್ಲ ಭಾಷೆಗಳ ಚಿತ್ರಗಳನ್ನು ಗೌರವಿಸುವ ಮನೋಭಾವ ಅಗತ್ಯ ಎಂದು ಹೇಳಿದರು. ಇತ್ತೀಚಿನ ಕೆಲವು ವಿವಾದಗಳ ಕುರಿತಾಗಿಯೂ ಪರೋಕ್ಷವಾಗಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಯಾರೇನು ಬೇಕಾದರೂ ಪೋಸ್ಟ್ ಮಾಡಬಹುದು. ಅದು ಅವರ ಆಯ್ಕೆ. ಆದರೆ, ಚಿತ್ರರಂಗದ ಪ್ರಮುಖ ವಿಚಾರಗಳ ಬಗ್ಗೆ ಸಂಬಂಧಪಟ್ಟ ಸಂಸ್ಥೆಗಳೇ ಅಧಿಕೃತವಾಗಿ ಪ್ರತಿಕ್ರಿಯಿಸಬೇಕು ಎಂದು ಅಭಿಪ್ರಾಯಪಟ್ಟರು. ಪವನ್ ಕಲ್ಯಾಣ್ ಅವರು ಕನ್ನಡ...

ಆಲ್ ಇಂಡಿಯಾ ಪೊಲೀಸ್ ಗೇಮ್ಸ್‌ನಲ್ಲಿ ಕನ್ನಡಿಗನ ಸಾಧನೆ – ಫಾಝಿಲ್‌ರೆಹಮಾನ್ ಗೆ ಬೆಳ್ಳಿ ಪದಕ”ರಾಷ್ಟ್ರಮಟ್ಟದಲ್ಲಿ ಮಿಂಚಿದ ಮಲೆನಾಡ ವೇಟ್‌ಲಿಫ್ಟರ್‌

Image
ಆಲ್ ಇಂಡಿಯಾ ಪೊಲೀಸ್ ಗೇಮ್ಸ್‌ನಲ್ಲಿ ಕನ್ನಡಿಗನ ಸಾಧನೆ – ಫಾಝಿಲ್‌ರೆಹಮಾನ್ ಗೆ ಬೆಳ್ಳಿ ಪದಕ”ರಾಷ್ಟ್ರಮಟ್ಟದಲ್ಲಿ ಮಿಂಚಿದ ಮಲೆನಾಡ ವೇಟ್‌ಲಿಫ್ಟರ್‌ ಹರಿಯಾಣ ರಾಜ್ಯದ ಕರ್ನಾಲ್ ಜಿಲ್ಲೆಯ ಮಧುಬನ್‌ನಲ್ಲಿ ನಡೆದ 2026-27ನೇ ಸಾಲಿನ All India Police Games Weightlifting Competition ನಲ್ಲಿ ಕರ್ನಾಟಕದ  ಕ್ರೀಡಾಪಟು ಗಮನಾರ್ಹ ಸಾಧನೆ ಮಾಡಿ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ.  ಇನ್ನೂ 110 ಕೆಜಿ ವಿಭಾಗದಲ್ಲಿ ಕೊಪ್ಪ ಮೂಲದ ಫಾಝಿಲ್ ರೆಹಮಾನ್ ಸಣ್ಣಕೇರೆ ಯವರು, CISF ದೆಹಲಿ ತಂಡದ ಪರವಾಗಿ ಸ್ಪರ್ಧಿಸಿ ಬೆಳ್ಳಿ ಪದಕ ಗೆದ್ದು ಅದ್ಭುತ ಸಾಧನೆ ಮಾಡಿದ್ದಾರೆ. ರಾಷ್ಟ್ರಮಟ್ಟದ ಈ ಪ್ರತಿಷ್ಠಿತ ಪೊಲೀಸ್ ಕ್ರೀಡಾಕೂಟದಲ್ಲಿ ಕನ್ನಡಿಗ ಕ್ರೀಡಾಪಟುಗಳು ಪದಕ ಗೆದ್ದಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಇವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದ ಸಾಧನೆ ಮಾಡಲು ಪ್ರೇರಣೆಯಾಗಲಿ ಎಂದು ಹಾರೈಸುವ ವಾರ್ತಾ ಸಾರಥಿ ಬಳಗ,,

ಆಲ್ ಇಂಡಿಯಾ ಪೊಲೀಸ್ ಗೇಮ್ಸ್‌ನಲ್ಲಿ ಕನ್ನಡಿಗರ ಸಾಧನೆ – ಫಾಝಿಲ್‌ಗೆ ಬೆಳ್ಳಿ, ಸುಚಿನ್‌ಗೆ ಕಂಚು”

Image
ಆಲ್ ಇಂಡಿಯಾ ಪೊಲೀಸ್ ಗೇಮ್ಸ್‌ನಲ್ಲಿ ಕನ್ನಡಿಗರ ಸಾಧನೆ – ಫಾಝಿಲ್‌ಗೆ ಬೆಳ್ಳಿ, ಸುಚಿನ್‌ಗೆ ಕಂಚು”ರಾಷ್ಟ್ರಮಟ್ಟದಲ್ಲಿ ಮಿಂಚಿದ ಕನ್ನಡಿಗ ವೇಟ್‌ಲಿಫ್ಟರ್‌ಗಳು ಹರಿಯಾಣ ರಾಜ್ಯದ ಕರ್ನಾಲ್ ಜಿಲ್ಲೆಯ ಮಧುಬನ್‌ನಲ್ಲಿ ನಡೆದ 2026-27ನೇ ಸಾಲಿನ All India Police Games Weightlifting Competition ನಲ್ಲಿ ಕರ್ನಾಟಕದ ಇಬ್ಬರು ಕನ್ನಡಿಗ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ.  ಇನ್ನೂ 110 ಕೆಜಿ ವಿಭಾಗದಲ್ಲಿ ಕೊಪ್ಪ ಮೂಲದ ಫಾಝಿಲ್ ರೆಹಮಾನ್, CISF ದೆಹಲಿ ತಂಡದ ಪರವಾಗಿ ಸ್ಪರ್ಧಿಸಿ ಬೆಳ್ಳಿ ಪದಕ ಗೆದ್ದು ಅದ್ಭುತ ಸಾಧನೆ ಮಾಡಿದ್ದಾರೆ. 88 ಕೆಜಿ ವಿಭಾಗದಲ್ಲಿ ಸುಳ್ಯದ ಸುಚಿನ್ ಕುಮಾರ್, ಕರ್ನಾಟಕ ಪೊಲೀಸ್ ತಂಡವನ್ನು ಪ್ರತಿನಿಧಿಸಿ ಕಂಚಿನ ಪದಕ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಷ್ಟ್ರಮಟ್ಟದ ಈ ಪ್ರತಿಷ್ಠಿತ ಪೊಲೀಸ್ ಕ್ರೀಡಾಕೂಟದಲ್ಲಿ ಕನ್ನಡಿಗ ಕ್ರೀಡಾಪಟುಗಳು ಪದಕ ಗೆದ್ದಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಇವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದ ಸಾಧನೆ ಮಾಡಲು ಪ್ರೇರಣೆಯಾಗಲಿ ಎಂದು ಹಾರೈಸುವ ವಾರ್ತಾ ಸಾರಥಿ ಬಳಗ,,

ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,

Image
  ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,  ಮುಸ್ಲಿಂ ಸಂಯುಕ್ತ ಒಕ್ಕೂಟ ಕೊಪ್ಪ ಇವರ ವತಿಯಿಂದ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಕೊಪ್ಪ ಕಾರ್ಯಕ್ರಮ, ಕೊಪ್ಪ: ಕೊಪ್ಪ ತಾಲ್ಲೂಕು ಮುಸ್ಲಿಂ ಸಂಯುಕ್ತ ಒಕ್ಕೂಟದ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶುಕ್ರವಾರ ಕೊಪ್ಪ ಪುರಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕೊಪ್ಪ ತಾಲ್ಲೂಕಿನ ಜಮಾಅತ್‌ಗಳನ್ನು ಒಳಗೊಂಡಿರುವ ಈ ಒಕ್ಕೂಟದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮಾಜದ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಯಪುರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಷಾ ಗುಪ್ತಾ, ಇಂತಹ ಪ್ರೋತ್ಸಾಹಕಾರಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಗುತ್ತವೆ. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇಂಟರ್ನೆಟ್‌ನಲ್ಲಿ ಸಮಯ ವ್ಯರ್ಥ ಮಾಡದೆ ಉತ್ತಮ ಭವಿಷ್ಯ ನಿರ್ಮಾಣದತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಯಪುರ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರ...

ಕರ್ನಾಟಕ ಕಲ್ಚರಲ್ ಫೌಂಡೇಶನ್, ಕೆ ಸಿ ಎಫ್ ಕುವೈಟ್, ಕೆ ಸಿ ಎಫ್ ಫೌಂಡೇಶನ್ ಡೇ,

Image
  ಕರ್ನಾಟಕ ಕಲ್ಚರಲ್ ಫೌಂಡೇಶನ್, ಕೆ ಸಿ ಎಫ್ ಕುವೈಟ್, ಕೆ ಸಿ ಎಫ್ ಫೌಂಡೇಶನ್ ಡೇ, 2026 ದಿನಾಂಕ ಫೆಬ್ರವರಿ 13 ಶುಕ್ರವಾರ ಮಗ್ರಿಬ್ ನಮಾಝ್ ನಂತರ ಸಾಲ್ಮೀಯ ಸುನ್ನಿ ಸೆಂಟರ್ ನಲ್ಲಿ ಕೆ ಸಿ ಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನೊಂದಿಗೆ ಆರಂಭವಾಯಿತು. ಪ್ರಧಾನ ಕಾರ್ಯದರ್ಶಿ ಮುಸ್ತಫ ಉಳ್ಳಾಲ ಸ್ವಾಗತಿಸಿದರು. ಸಂಘಟನಾ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಉದ್ಘಾಟಿಸಿದರು.ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಕೆಸಿಎಫ್ ಡೇ ಬಗ್ಗೆ ವಿವರಿಸಿದರು. ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಫಾರೂಕ್ ಸಖಾಫಿ ರಮಳಾನ್ ತಿಂಗಳ ಬಗ್ಗೆ ತರಗತಿ ನಡೆಸಿದರು.  ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಸಂಘಟನಾ ಚರ್ಚಾಕೂಟದಲ್ಲಿ ವಿಷಯ ಮಂಡಿಸಿ ಉಪಯುಕ್ತ ಸಲಹೆ ನೀಡಿದರು.ಕೆಸಿಎಫ್ಅಂತರರಾಷ್ಟ್ರೀಯ ನಾಯಕರಾದ ಜನಾಬ್ ಝಕರ್ರಿಯ್ಯಾ ಆನೆಕಲ್ ಮತ್ತು ಜನಾಬ್ ಯಾಕೂಬ್ ಕಾರ್ಕಳ ಕಾರ್ಯಕ್ರಮದ ಅವಲೋಕನ ನಡೆಸಿ ವಿಷಯ ಮಂಡಿಸಿದರು. ನೋರ್ತ್ ಝೋನ್ ಅಧ್ಯಕ್ಷರಾದ ಬಹುಮಾನ್ಯ ಕಾಸಿಂ ಉಸ್ತಾದ್ ಬೆಲ್ಮ ಹಾಗೂ ಸೌತ್ ಝೋನ್ ನಾಯಕರಾದ ಜನಾಬ್ ಶಫೀಕ್ ಬೊಂದೆಲ್ ಆಶಂಷ ಕೋರಿದರು. ಮಹಬುಲ ಸೆಕ್ಟರ್ ಕಾರ್ಯಕರ್ತ ಜನಾಬ್ ಅರ್ಬಾಝ್ ಇಸ್ಲಾಮಿಕ್ ಹಾಡು ಹಾಡಿ ನೆರೆದವರನ್ನು...
Image
  ಕೊಪ್ಪ :ಪಟ್ಟಣದ ಹೊರವಲಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಣ್ಣಕೆರೆಯ ಮಕ್ಕಳು ಇಂಗ್ಲಿಷ್ ಫೆಸ್ಟ್ ನಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ. ಪಿಎಂಶ್ರೀ ಕೆಪಿಎಸ್ ಶಾಲೆ ಕೊಪ್ಪ ಪಟ್ಟಣದಲ್ಲಿ ನಡೆದ ಮೂರು ಕ್ಲಸ್ಟರ್ ಗಳ ನಡುವಿನ ಇಂಗ್ಲಿಷ್ ಫೆಸ್ಟ್ ನ 1 ರಿಂದ 5 ನೇ ತರಗತಿಯ ಸ್ಪರ್ಧೆಗಳಲ್ಲಿ ಸಣ್ಣಕೆರೆ ಶಾಲೆಯ ವಿದ್ಯಾರ್ಥಿಗಳಾದ ಶೌರ್ಯ ಯು ರೀಡಿಂಗ್ ಪ್ರಥಮ, ಸೈಯದ್ ಆರಿಜ್ ಅರ್ಹಂ ರೈಟಿಂಗ್ ಸ್ಪರ್ಧೆಯಲ್ಲಿ ದ್ವಿತೀಯ, ತನಯ್ ಗೌಡ ಸ್ಟೋರಿ ಟೆಲ್ಲಿಂಗ್ ತೃತೀಯ, ಅಕ್ಷರ ಎಸ್ ಶೆಟ್ಟಿ ಪಿಕ್ ಅಂಡ್ ಸ್ಪೀಚ್ ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ. ಕನ್ನಡ ಮಾಧ್ಯಮದ ಮಕ್ಕಳು ಇಂಗ್ಲಿಷ್ ಭಾಷೆಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿರುವುದಕ್ಕೆ ಶಾಲಾ ಎಸ್‌.ಡಿ.ಎಂ.ಸಿ ಮತ್ತು ಊರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಎಸ್. ಡಿ. ಎಂ. ಸಿ ಮತ್ತು ದಾನಿಗಳ ಸಹಕಾರದಿಂದ ಪೂರ್ವ ಪ್ರಾಥಮಿಕ ಎಲ್. ಕೆ. ಜಿ, ಯು.ಕೆ. ಜಿ ತರಗತಿಗಳನ್ನು ಶಾಲೆಯಲ್ಲಿ ಆರಂಭಿಸುತ್ತಿದ್ದು, ಈ ಇಂಗ್ಲಿಷ್ ಸ್ಪರ್ಧೆಗಳಲ್ಲಿ ಈ ಬಾರಿ ಅತಿ ಹೆಚ್ಚು ಮಕ್ಕಳು ಬಹುಮಾನವನ್ನು ಪಡೆದಿರುವುದು ಹೊಸ ಪೋಷಕರಿಗೆ ಪ್ರೇರಣೆಯಾಗಲಿದೆ ಎಂದು ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಬಿ. ವಿಜಯ್ ಶುಭ ಹಾರೈಸಿದರು.ಶಾಲಾ ಮುಖ್ಯ ಶಿಕ್ಷಕಿ ಭಾರತಿ ಎ, ಸಹಶಿಕ್ಷಕಿ ಆಶಾಲತಾ ಬಿ, ಅತಿಥಿ ಶಿಕ್ಷಕರಾದ ಸುಮ ಮಕ್ಕಳಿಗೆ ಅಭಿನಂದನೆ ತಿಳಿಸಿದ್...

ದುಬೈ ವೈಮಾನಿಕ ಪ್ರದರ್ಶನದಲ್ಲಿ ಭಾರತೀಯ ಯುದ್ಧ ವಿಮಾನ ಅಪಘಾತ, ಪೈಲಟ್ ದುರ್ಮರಣ,

Image
ದುಬೈ ವೈಮಾನಿಕ ಪ್ರದರ್ಶನದಲ್ಲಿ ಭಾರತೀಯ ಯುದ್ಧ ವಿಮಾನ ಅಪಘಾತ, ಪೈಲಟ್ ದುರ್ಮರಣ, ದುಬೈ - ದುಬೈನಲ್ಲಿ ನಡೆದ ವೈಮಾನಿಕ ಪ್ರದರ್ಶನದಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಭಾರತೀಯ ಯುದ್ಧ ವಿಮಾನ ಪತನಗೊಂಡು ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ತಂಡ ರಚಿಸಲಾಗುತ್ತಿದೆ. ದುಬೈನ ಮಾಧ್ಯಮ ಕಚೇರಿ ಮತ್ತು ಯುಎಇ ರಕ್ಷಣಾ ಸಚಿವಾಲಯವು ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳು ಘಟನೆಗೆ "ಕ್ಷಿಪ್ರವಾಗಿ ಪ್ರತಿಕ್ರಿಯಿಸಿವೆ" ಮತ್ತು ಸ್ಥಳದಲ್ಲಿ ಪರಿಸ್ಥಿತಿಯನ್ನು ನಿರ್ವಹಿಸುತ್ತಿವೆ ಎಂದು ತಿಳಿಸಿವೆ. ದುಬೈ ಏರ್‌ಶೋ 2025 ವೆಬ್‌ಸೈಟ್ ಹೇಳುವಂತೆ ಈ ಕಾರ್ಯಕ್ರಮವು 1,500 ಕಂಪನಿಗಳಿಂದ 148,000 ಕ್ಕೂ ಹೆಚ್ಚು ಪ್ರೇಕ್ಷಕರು ಮತ್ತು ಪ್ರದರ್ಶಕರನ್ನು ಆಕರ್ಷಿಸಿದೆ. ಸೋಮವಾರ ಪ್ರಾರಂಭವಾದ ವೈಮಾನಿಕ ಪ್ರದರ್ಶನದ ಕೊನೆಯ ದಿನದಂದು ಈ ಭೀಕರ ಅಪಘಾತ ಸಂಭವಿಸಿದೆ.