ಪತ್ರಕರ್ತ ಹರೀಶ್ ಸಹಿತ, ಶನಿವಾರ ಸಂತೆ ಪಾಕಿಸ್ತಾನ್ ಝಿಂದಾಬಾದ್ ಪ್ರಕರಣ : ಪತ್ರಕರ್ತ ಹರೀಶ್ ಸಹಿತ ಮೂವರ ಮೇಲೆ ಎಫ್ ಐ ಆರ್

ಮಡಿಕೇರಿ:- ಶನಿವಾರ ಸಂತೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ತಿರುಚಿ ಪಾಕಿಸ್ತಾನ್ ಝಿಂದಾಬಾದ್ ಹೇಳಿದ್ದಾರೆಂದು ವದಂತಿ ಹಬ್ಬಿಸಿದ ಆರೋಪದಲ್ಲಿ ಮೂವರ ಮೇಲೆ ಎಫ್ ಐ ಆರ್ ದಾಖಲಾಗಿದೆ . ರಘು ಎಸ್ ಎನ್ , ಹರೀಶ್ ಹಾಗು ಗಿರೀಶ್ ಆರೋಪಿಗಳು . ಈ ಪೈಕಿ ಹರೀಶ್ ಕನ್ನಡ ಪ್ರಭ ಪತ್ರಿಕೆಯ ಸ್ಥಳೀಯ ವರದಿಗಾರನಾಗಿದ್ದು , ಸೋಮವಾರಪೇಟೆ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದಾರೆ . ಶನಿವಾರ ಸಂತೆ ಗ್ರಾಮ ಪಂಚಾಯತ್ ಸದಸ್ಯ ರಘು , ಮಾಜಿ ಸದಸ್ಯ ಹಾಗು ಪತ್ರಕರ್ತ ಹರೀಶ್ ಹಾಗು ಕುಶಾಲ್ ನಗರದ ಗಿರೀಶ್ ಕೋಮು ಸೌಹಾರ್ದ ಕದಡುವ ದುರುದ್ದೇಶದಿಂದ ತಿರುಚಿದ ವಿಡಿಯೋ ವಾಟ್ಸ್ ಆಪ್ ನಲ್ಲಿ ಹರಡಿ ಪ್ರತಿಭಟನೆಯ ಸಂದರ್ಭ ಮುಸ್ಲಿಂ ಮಹಿಳೆಯರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ , ಹಿಂದೂ ಸಂಘಟನೆ ಮೇಲೆ ದಬ್ಬಾಳಿಕೆ ನಡೆಸುತ್ತಲೇ ಬಂದಿದ್ದಾರೆ . ಹಾಗಾಗಿ ನ .15 ರಂದು ಶನಿವಾರ ಸಂತೆ ಬಂದ್ ಮಾಡುವಂತೆ ಕರೆ ನೀಡಿದ್ದರು ಎಂದು ಎಫ್ ಐ ಆರ್ ನಲ್ಲಿ ಹೇಳಲಾಗಿದೆ . ಪ್ರತಿಭಟನೆಯ ವೇಳೆ ಮುಸ್ಲಿಂ ಮಹಿಳೆಯರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದೂ ಎಫ್ ಐ ಆರ್ ನಲ್ಲಿ ದಾಖಲಾಗಿದೆ . ಇದೀಗ ಮೂವರು ಆರೋಪಿಗಳ ವಿರುದ್ಧ ಐಪಿಸಿ 34 , 153 ಅಡಿಯಲ್ಲಿ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?