ಚಿಕ್ಕಮಗಳೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ, ಬಸ್ಸ್ ಹಾಗೂ ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಐವರ ಸಾವು
ಸುದ್ದಿ,🖋ವೀರಮಣಿ
ಬೆಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ದುರ್ಮರಣವನ್ನಪ್ಪಿದ್ದಾರೆ .
ಹಾಸನ ಜಿಲ್ಲೆಯ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿಯಾದ ಪರಿಣಾಮ ಕಾರಿನಲ್ಲಿದ್ದ ಐವರೂ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ .
ಮೃತಪಟ್ಟವರನ್ನು ಬೇಲೂರು ಮೂಲದವರೆಂದು ಗುರುತಿಸಲಾಗಿದ್ದು ಎಲ್ಲಾ ಮೃತದೇಹಗಳನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ . ಮೃತರನ್ನು ಹಸನ್ ( 20 ) ಅಕ್ಕಲ್ ( 19 ) , ಜಿಲಾನಿ ( 19 ) , ತೋಯಿದ್ ( 18 ) , ಕೈಫ್ ( 18 ) ಎಂದು ಗುರುತಿಸಲಾಗಿದೆ .
ಈ ಭೀಕರ ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು , ಪೊಲೀಸರು ವಾಹನ ಸವಾರರು ಕಾರಿನಲ್ಲಿದ್ದವರನ್ನು ಹೊರತೆಗೆಯಲು ಬಹಳಷ್ಟು ಪ್ರಯತ್ನಪಟ್ಟಿದ್ದಾರೆ ಆದರೆ ಕಾರು ಸಂಪೂರ್ಣ ಜಖಂ ಆದ ಕಾರಣ ಕಾರಿನಲ್ಲಿದ್ದವರನ್ನು ಹೊರತೆಗೆಯಲು ಹರಸಾಹಸವನ್ನೇ ಸ್ಥಳೀಯರು ಮಾಡಿದ್ದಾರೆ . ಮೃತಪಟ್ಟವರೆಲ್ಲರೂ ಯುವಕರೇ ಆಗಿದ್ದು ಮಕ್ಕಳನ್ನು ಕಳೆದುಕೊಂಡ ಪೋಷಕರಂತೂ ಅತ್ಯಂತ ದುಃಖದಲ್ಲಿದ್ದಾರೆ . ಅಪಘಾತ ಹೊಂದಿದ ಆಲ್ಟೋ ಕಾರ್ ಸಂಪೂರ್ಣ ಜಖಂಗೊಂಡಿದೆ .






Comments
Post a Comment