ಮಾನವೀಯತೆ ಮೆರೆದ ಸಚಿವ ಸುನಿಲ್ ಕುಮಾರ್,ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ,


 

ಮಾನವೀಯತೆ ಮೆರೆದ ಸಚಿವ ಸುನಿಲ್ ಕುಮಾರ್,ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ,


ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ಮೆಸ್ಕಾಂ ಕಟ್ಟಡ , ಹಾಗೂ ಶೃಂಗೇರಿ ಶಾರದಾಮಾತೆಯ ದರ್ಶನ ಹಾಗೂ ಉಭಯ ಶ್ರೀಗಳ ದರ್ಶನ ಪಡೆದು ಶೃಂಗೇರಿಯಿಂದ ಕಾರ್ಕಳದ ಕಡೆಗೆ ತಮ್ಮ ವಾಹನದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನೋರ್ವ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಯಾರೂ ಸಹಾಯಕ್ಕೆ ಮುಂದೆ ಬಾರದ ಈ ಪರಿಸ್ಥಿತಿಯಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಮಾನವೀಯತೆ ಮೆರೆದು ಆತನನ್ನು ತುರ್ತಾಗಿ ಆಸ್ಪತ್ರೆಗೆ ದಾಖಲು ಮಾಡುವಲ್ಲಿ ಸಹಕರಿಸಿದ್ದಾರೆ,



ಅಪಘಾತಕ್ಕೀಡಾದ ಯುವಕ ಬಾಳೆಹೊನ್ನೂರು ಮೂಲದವನು ಎಂದು ಗುರುತಿಸಲಾಗಿದ್ದು , ಸಚಿವರ ಹಿಂದಿದ್ದ ಬೆಂಗಾವಲು ವಾಹನದಲ್ಲಿ ಆತನನ್ನು ಕಾರ್ಕಳದ ಆಸ್ಪತ್ರೆಗೆ ದಾಖಲು ಮಾಡಿ ಅಗತ್ಯವಾಗಿದ್ದ ಚಿಕಿತ್ಸೆ ದೊರೆಯುವಂತೆ  ಮಾಡಿದ  ಸಚಿವ ಸುನಿಲ್ ಕುಮಾರ್ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.




🖊️ವೀರಮಣಿ,









Comments

Popular posts from this blog

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!