ಮೋದಿ ಕ್ಯಾಂಟೀನ್ ತೆರೆದ ಮಾಜಿ ಐಎಎಸ್ ಅಧಿಕಾರಿ, ಕೆ ಶಿವರಾಂ,





 ಬೆಂಗಳೂರು; ಮಾಜಿ ಐಎಎಸ್ ಅಧಿಕಾರಿ ಕೆ.‌ಶಿವರಾಂ ಆನೇಕಲ್‌ನಲ್ಲಿ ಮೋದಿ ಕ್ಯಾಂಟೀನ್ ತೆರೆದು ಸುದ್ದಿಯಾಗಿದ್ದಾರೆ.

ಆನೇಕಲ್‌ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ನಿವೃತ್ತ ಐಎಎಸ್ ಅಧಿಕಾರಿ ಶಿವರಾಂ‌ ಆನೇಕಲ್ ನಲ್ಲಿ ಮೋದಿ ಕ್ಯಾಂಟೀನ್ ತೆರೆದಿದ್ದಾರೆ.

ತಾಲೂಕು ಕಚೇರಿಯ ಬಳಿಯಲ್ಲಿ ಮೋದಿ ಕ್ಯಾಂಟೀನ್ ತೆರೆದಿರುವ ಕೆ.ಶಿವರಾಂರವರು ಬಡ ಹಾಗೂ ಮಧ್ಯಮ ಕಾರ್ಮಿಕರು, ಜನಸಾಮಾನ್ಯರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ರೈತರು,


ಶಾಲಾಕಾಲೇಜು ವಿದ್ಯಾರ್ಥಿಗಳಿಗೆ ಮೋದಿ ಕ್ಯಾಂಟೀನ್ ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟದ ವ್ಯವಸ್ಥೆಗೆ ಸಜ್ಜಾಗಿದ್ದಾರೆ.

ಬೆಳಗ್ಗೆ , ಮಧ್ಯಾಹ್ನ, ರಾತ್ರಿಯಲ್ಲೂ ಊಟದ ವ್ಯವಸ್ಥೆಯನ್ನು ಮಾಡಿದ್ದು ಬೆಳಗ್ಗೆ 10ರೂಪಾಯಿ, ಮಧ್ಯಾಹ್ನ ರಾತ್ರಿ15ರೂಪಾಯಿ, ಕಾಫಿ, ಟೀ 5ರೂಪಾಯಿ ಮೋದಿ ಕ್ಯಾಂಟೀನ್ ನಲ್ಲಿ ಸಿಗಲಿದೆ ಎಂದು ಬೋರ್ಡ್‌ ಹಾಕಲಾಗಿದೆ,










Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?