ರಾಜ್ಯದಲ್ಲಿ ಸರ್ಕಾರಿ ಗೋ ಶಾಲೆ,


 

ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗೆ ಒತ್ತು ನೀಡುವ ಸಲುವಾಗಿ ಹಾಗೂ ಗೋವುಗಳ ಉಳಿವಿಗಾಗಿ ಹೆಜ್ಜೆಯಿಟ್ಟಿರುವ ರಾಜ್ಯ ಸರ್ಕಾರ ಜುಲೈ ತಿಂಗಳಿನಲ್ಲಿ ಐದು ಗೋಶಾಲೆಗಳನ್ನು ಲೋಕಾರ್ಪಣೆ ಮಾಡಲಿದೆ .


ಗೋಹತ್ಯಾ ನಿಷೇಧ ಕಾಯ್ದೆಯನ್ನು ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅನುಷ್ಟಾನಕ್ಕೆ ತಂದು ಒಂದೆಡೆಯಿಂದ ಗೋವುಗಳ ಉಳಿವಿಗಾಗಿ ಒಂದು ಹೆಜ್ಜೆ ಇಟ್ಟಿದ್ದರೆ , ಇನ್ನೊಂದೆಡೆ ಅವುಗಳ ಮೇವು ಹಾಗೂ ಸುರಕ್ಷತೆಯ ಸಲುವಾಗಿ ಗೋಶಾಲೆಗಳ ನಿರ್ಮಾಣ ಮಾಡುತ್ತಿದೆ .


ಪ್ರಾಥಮಿಕ ಹಂತದಲ್ಲಿ ಜುಲೈ ತಿಂಗಳಿನಲ್ಲಿ ಚಿಕ್ಕಮಗಳೂರು , ವಿಜಯಪುರ , ಹಾವೇರಿ , ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗೋಶಾಲೆಯನ್ನು ಲೋಕಾರ್ಪಣೆ ಮಾಡುವ ಸಲುವಾಗಿ ಸಿದ್ಧತೆಗಳು ಆರಂಭವಾಗಿದೆ .


ನಿರ್ಮಾಣ ಮಾಡಿರುವ ಈ ಗೋಶಾಲೆಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದು ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ , ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲಾಗಿದೆ . ಗೋವುಗಳ ಆರೋಗ್ಯದ ಮೇಲೆ ನಿಗಾವಹಿಸಲು ಪಶುವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ . ಪ್ರತಿಯೊಂದು ಗೋಶಾಲೆ ಪ್ರಾರಂಭ ಮತ್ತು ನಿರ್ವಹಣೆಗೆ 50 ಲಕ್ಷ ರೂ . ಗಳನ್ನು ಸರ್ಕಾರ ನಿಗದಿಪಡಿಸಿದೆ . ಪ್ರತಿಯೊಂದು ಗೋಶಾಲೆಗಳಲ್ಲಿ 100 ರಿಂದ 150 ಗೋವುಗಳ ಪೋಷಣೆಗೆ ಅಗತ್ಯವಿರುವಂತೆ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ .



🖊️ ವೀರಮಣಿ


Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?