ಗ್ಯಾಸ್ ಕಟರ್ ನಿಂದ ಕಿಟಕಿಯ ರಾಡು ತುಂಡರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಖದೀಮರು,


 

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಿರೇಗದ್ದೆ ಇಲ್ಲಿನ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟರ್ ನಿಂದ ತುಂಡುಮಾಡಿ , ಕಳ್ಳರು ಆಫೀಸಿನ ಕ್ಯಾಶ್ ಬೋರ್ಡ್ ನಲ್ಲಿದ್ದ 325,000 ರೂಪಾಯಿ ನಗದು ಹಾಗೂ 8000 ರೂಪಾಯಿ ಬೆಲೆ ಬಾಳುವ ಹಾರ್ಡ್ ಡಿಸ್ಕ್ ನ್ನು ಕಳ್ಳತನ ನಡೆಸಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ಜಿ.ಆರ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ .


ಸ್ವಾತಂತ್ರ್ಯ ದಿನಾಚರಣೆಯಾದ ನಿನ್ನೆ ಇಲ್ಲಿನ ಪದಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಧ್ವಜಾರೋಹಣ ನಡೆಸಿ ಬೆಳಗ್ಗೆ 10.30 ಕ್ಕೆ ನಿರ್ಗಮಿಸಿದ್ದು ಈ ಅವಧಿಯಿಂದ ಇಂದು ಬೆಳಗ್ಗೆ 10.30 ರ ಒಳಗಿನ ಅವಧಿಯಲ್ಲಿ ಕಳ್ಳರು ಹಣವನ್ನು ದೋಚಿರಬಹುದು ಎನ್ನಲಾಗಿದೆ . ಘಟನಾ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು , ಪ್ರಕರಣದ ಸಂಬಂಧ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು ತನಿಖೆಯ ಬಳಿಕವಷ್ಟೇ ಈ ಕುರಿತಾದ ಸಂಪೂರ್ಣ ಮಾಹಿತಿ ಹೊರಬೀಳಲಿದೆ .



🖊️ ವೀರಮಣಿ,ಬಾಳೆಹೊನ್ನುರು 

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?