ಶೃಂಗೇರಿ:- ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ


 


ಶೃಂಗೇರಿ:- ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ . ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಕಾನ್ಸ್ಟೇ ಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ಪೂಜಾರಿ ( 29 ) ಅವರು ಅನಾರೋಗ್ಯದಿಂದಾಗಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದರು, ಅವರು ಇಂದು ಮುಂಜಾನೆ 3 : 45 ರ ಸುಮಾರಿಗೆ ವಿಧಿವಶರಾಗಿದ್ದಾರೆ .


ಮೃತರ ಸಾವಿನ ಕುರಿತು ಸಹೋದ್ಯೋಗಿಗಳು ಹಾಗೂ ಶೃಂಗೇರಿ ಠಾಣೆಯ ಅಧಿಕಾರಿಗಳು ಬೇಸರವನ್ನು ವ್ಯಕ್ತಪಡಿಸಿದ್ದು , ಸಂತಾಪ ಸೂಚಿಸಿದ್ದಾರೆ . ಮೃತ ಜಗನ್ನಾಥ್ ಪೂಜಾರಿ ಅವರು ಮೂಲತಃ ಬಿಜಾಪುರದವರಾಗಿದ್ದರು.






🖋 ವೀರಮಣಿ ಬಾಳೆಹೊನ್ನುರು

Comments

Popular posts from this blog

ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,