ಕಳ್ಳತನಕ್ಕೆ ಬಂದು ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಳ್ಳ,!


 


ಬೆಂಗಳೂರು:- ಇಂದಿರಾ ನಗರದಲ್ಲಿ ಮನೆಗೆ ಕಳ್ಳತನ ಮಾಡಲು ಬಂದ ಕಳ್ಳ ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ, ಮೃತ ವ್ಯಕ್ತಿಯು ಅಸ್ಸಾಂ ಮೂಲದ ದಿಲೀಪ್ ಕುಮಾರ್ ( 46 ) ಎಂದು ತಿಳಿದುಬಂದಿದೆ . ಮನೆಯ ಮಾಲೀಕರು ಕುಟುಂಬ ಸಮೇತರಾಗಿ ಪ್ರವಾಸ ಹೋಗಿದ್ದರು . ಮರಳಿ ಬಂದಾಗ ಮನೆಯಲ್ಲಿ ಯಾರೋ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು . ದೇವರ ಮನೆಯ ಕಿಟಕಿ ತೆಗೆದು ನೋಡಿದಾಗ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ,


ತಕ್ಷಣ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ಮೃತ ದಿಲೀಪ್ ಕುಮಾರ್ ಈ ಹಿಂದೆಯೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ . ಇದೀಗ ಘಟನೆ ಸಂಬಂಧ ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ .

Comments

Popular posts from this blog

ಕೊಪ್ಪ:- ಪ್ರತಿಭೆಗೆ ಪ್ರೋತ್ಸಾಹ: ಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿಗಳ ಸಾಧನೆಗೆ ಕೊಪ್ಪದಲ್ಲಿ ಭರ್ಜರಿ ಗೌರವ,