ಶೃಂಗೇರಿ:- ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲವಿಲ್ಲ ಕಲ್ಮಕ್ಕಿ ಉಮೇಶ್ ಹೇಳಿಕೆ,


 



ಶೃಂಗೇರಿ:- ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲವಿಲ್ಲ ಕಲ್ಮಕ್ಕಿ ಉಮೇಶ್ ಹೇಳಿಕೆ,




ಶೃಂಗೇರಿ:- ಕ್ಷೇತ್ರದ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಕುರಿತು ಯಾವುದೇ ಗೊಂದಲವಿಲ್ಲ , ಹಿರಿಯ ನಾಯಕರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿದ್ದಾರೆ . ಆದ್ದರಿಂದ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವ ಗೊಂದಲವೂ ಇಲ್ಲ ಎಂದು ಬಿಜೆಪಿ ಮುಖಂಡ ಟಿ.ಎಂ. ಉಮೇಶ್ ಕಲಕ್ಕಿ ಹೇಳಿದ್ದಾರೆ .


ಕಾರ್ಯಕರ್ತರು ಈಗಾಗಲೇ ಕ್ಷೇತ್ರದಲ್ಲಿ ಚುನಾವಣೆ ಬಗ್ಗೆ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ . ಡಿ.ಎನ್ ಜೀವರಾಜ್ ಅವರು ಕ್ಷೇತ್ರದಲ್ಲಿ ಈ ಹಿಂದೆ 15 ವರ್ಷಗಳ ಕಾಲ ಶಾಸಕರಾಗಿ ಹಾಗೂ ಕಳೆದ 5 ವರ್ಷಗಳ ಕಾಲ ಮಾಜಿ ಶಾಸಕರಾಗಿಯೂ ಸಹ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆಯ ಆಧಾರದಲ್ಲಿ ಮುಂಬರುವ ಚುನಾವಣೆಯಲ್ಲಿ ಗೆಲ್ಲುವುದು ಸ್ಪಷ್ಟವಾಗಿದೆ . ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು , ಪಕ್ಷದ ಅಭಿಮಾನಿಗಳು ಗೊಂದಲಕ್ಕೊಳಗಾಗದೆ ಚುನಾವಣೆ ಬಗ್ಗೆ ಸಕ್ರಿಯವಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ .



ಕೆಲವು ಸಂಘಟನೆ , ವ್ಯಕ್ತಿಗಳು ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗಬೇಕು ಹಾಗೂ ಕೆಲವು ವ್ಯಕ್ತಿಗಳು ಕ್ಷೇತ್ರದಲ್ಲಿ ನಾವು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ . ಆದರೆ ಇತ್ತೀಚೆಗೆ ಕೊಪ್ಪದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ , ಹಾಗೂ ಮಾಜಿ ಸಿಎಂ ಬಿ.ಎಸ್ .ಯಡಿಯೂರಪ್ಪ ಅವರೇ ಡಿ.ಎನ್.ಜೀವರಾಜ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ , ಜೀವರಾಜ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಹೇಳಿಕೆ ನೀಡಿದ್ದಾರೆ .




🖊️ ವೀರಮಣಿ ಬಾಳೆಹೊನ್ನುರು,

Comments

Popular posts from this blog

ಕೊಪ್ಪ:- ತಾಲೂಕಿನ ಭಾರತ್ ರೈಸ್ ಮಿಲ್ ಬಳಿ ಭೀಕರ ರಸ್ತೆ ಅಪಘಾತ ನುಜ್ಜು ಗುಜ್ಜಾದ ಬೈಕ್,ಸ್ಥಳದಲ್ಲೇ ಅಸುನೀಗಿದ ಬೈಕ್ ಸವಾರ,

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ,ಫೋಕ್ಸೋ ಪ್ರಕರಣ ಆರೋಪಿ ಶಶಾಂಕ್ ಬಂಧನ,

ಕೊಪ್ಪ,ಶ್ರೀನಿಧಿ ಶೆಟ್ಟಿ ವಿದ್ಯಾರ್ಥಿನಿ ಆತ್ಮಹತ್ಯೆ, ಸುತ್ತಅನುಮಾನ ಗಳ ಹುತ್ತ ?