Posts

Showing posts from June, 2025

ಕೊಪ್ಪಳದ ಅಶೋಕ ವೃತ್ತದಲ್ಲಿ ದೇವನಹಳ್ಳಿ ಚಳುವಳಿನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ.

Image
 ಕೊಪ್ಪಳದ ಅಶೋಕ ವೃತ್ತದಲ್ಲಿ ದೇವನಹಳ್ಳಿ ಚಳುವಳಿನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ. ಕೊಪ್ಪಳ : ದೇವನಹಳ್ಳಿ ಚಳುವಳಿ ನಿರತ ರೈತರ ಬಂಧನ ಖಂಡಿಸಿ ಸಂಯುಕ್ತ ಹೋರಾಟ - ಕರ್ನಾಟಕ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ  ಎಚ್ಚರಿಕೆ ನೀಡಿ ಬಂಧಿತ ರೈತರನ್ನು ಬಿಡುಗಡೆಗೆ ಆಗ್ರಹಿಸಿದರು.       ಕೊಪ್ಪಳ ಜಿಲ್ಲೆಯ ರೈತ ಪರ ಚಳವಳಿಗಾರರು ಮಾತನಾಡಿ ದೇವನಹಳ್ಳಿ ಸೇರಿದಂತೆ 13 ಗ್ರಾಮಗಳಲ್ಲಿನ ರೈತರು ಸರ್ಕಾರದ ಬಲವಂತದ ಭೂ ಸ್ವಾಧೀನ ರೈತ ವಿರೋಧಿ ನೀತಿಗಳನ್ನು ಪ್ರತಿಭಟಿಸಿ, ಸುಮಾರು 1180 ದಿನಗಳಿಂದ, ದೇವನಹಳ್ಳಿಯ ಸಂತೆ ಮೈದಾನದಲ್ಲಿ ಶಾಂತಿಯುತ ಚಳುವಳಿಯನ್ನು ನಡೆಸುತ್ತಿದ್ದರು. ಇಂಥದೊಂದು ದೀರ್ಘಾವಧಿಯ ರೈತ ಚಳುವಳಿ ನಡೆಯುತ್ತಿದ್ದರೂ, ಸರ್ಕಾರ ಮಾತ್ರ ಎನೂ ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶಿಸಿತು. ಇದು ರೈತರ ತಾಳ್ಮೆಗೆಡಲು ಕಾರಣವಾಯಿತು. ಇದರಿಂದಾಗಿ ರೈತರ ಚಳುವಳಿಯು ತೀವ್ರತೆ ಪಡೆಯಿತು.          ಕೊಪ್ಪಳ ನಗರದಲ್ಲಿ 25. 06. 2025ರಂದು ದೇವನಹಳ್ಳಿಯ ರೈತ ಚಳುವಳಿಗೆ ಬೆಂಬಲಿಸಿದ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು, ಕಾರ್ಮಿಕರು, ಜನಪರ ಸಂಘಟನೆಗಳ ಕಾರ್ಯಕರ್ತರು ದೇವನಹಳ್ಳಿ ಚಲೋ ಚಳುವಳಿಯ ಭಾಗವಾಗಿ ಅಲ್ಲಿ ಸಾವಿರ ಸಾವಿರ ಸಂಖ...

ಕೊಪ್ಪಳ: ಸರ್ವ ಧರ್ಮಗಳ ಸಾರ ಸೌಹಾರ್ದತೆ ಮತ್ತು ಮಾನವೀಯತೆಯಾಗಿದೆ ಎಂದು ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ರಾಜ್ಯಾಧ್ಯಕ್ಷ ಹಾಫಿಝ್ ಮೊಹಮ್ಮದ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಹೇಳಿದರು.

Image
  ಸರ್ವ ಧರ್ಮಗಳ ಸಾರ ಸೌಹಾರ್ದತೆ. ಮಾನವೀಯತೆಯಾಗಿದೆ - ಸುಫ್ಯಾನ್ ಸಖಾಫಿ ಅಲ್ ಹಿಕಮಿ.   ಕೊಪ್ಪಳ: ಸರ್ವ ಧರ್ಮಗಳ ಸಾರ ಸೌಹಾರ್ದತೆ ಮತ್ತು ಮಾನವೀಯತೆಯಾಗಿದೆ ಎಂದು ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ರಾಜ್ಯಾಧ್ಯಕ್ಷ ಹಾಫಿಝ್ ಮೊಹಮ್ಮದ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಹೇಳಿದರು.     ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ವತಿಯಿಂದ ರಾಜ್ಯಾದ್ಯಂತ ನಡೆಸುತ್ತಿರುವ 'ಸೌಹಾರ್ದ ನಡಿಗೆ' ಜಾಥಾ ಶುಕ್ರವಾರ ಕೊಪ್ಪಳ ನಗರಕ್ಕೆ ತಲುಪಿದ್ದು. ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿಯ ಕನಕ ದಾಸ ವೃತ್ತದಲ್ಲಿ ಸೌಹಾರ್ದ ನಡಿಗೆ ಕಾರ್ಯಕ್ರಮಕ್ಕೆ ಕೊಪ್ಪಳ ತಾಲೂಕಿನ ಬಿಸರಹಳ್ಳಿಯ  ಶ್ರೀ ಮರುಳಸಿದ್ದೇಶ್ವರ ಮಠ ಸುಕ್ಷೇತ್ರದ ಪರಪೂಜ್ಯ ಶ್ರೀ  ಮಳಿಯಯ್ಯ ಸ್ವಾಮಿಗಳು ಚಾಲನೆ ನೀಡಿದರು. ಅಶೋಕ ವೃತ್ತ ತಲುಪಿದ ಬಳಿಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ರಾಜ್ಯಾಧ್ಯಕ್ಷ ಹಾಫಿಝ್ ಮೊಹಮ್ಮದ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮುಂದುವರೆದು ಮಾತನಾಡಿ ರಾಜ್ಯದ 20ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ರಾಜ್ಯದ ಪ್ರಮುಖ ಸ್ವಾಮೀಜಿಗಳು.ಕ್ರೈಸ್ತ ಫಾದರ್‌ಗಳು.ಮುಸ್ಲಿಮ್ ಧರ್ಮ ಗುರುಗಳು ಹಾಗೂ ಇನ್ನಿತರ ಪ್ರಮುಖ ಜನಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಬೆಂಬಲಿಸುತ್ತಿದ್ದಾರೆ.ಈ ಕರುನಾಡು ಭಾವೈಕ್ಯತೆಯ ಪರಂಪರೆಯುಳ್ಳ ನಾಡು. ಆದರೆ ಸ್ವಾರ್ಥ ರಾಜಕೀಯ...

ಕೊಪ್ಪಳದಲ್ಲಿ ಜೂನ್ 27 ಕ್ಕೆ ಮನುಷ್ಯ ಮನಸ್ಸುಗಳನ್ನು ಪೋಣಿಸುವ ಸೌಹಾರ್ದ ನಡಿಗೆ,

Image
  ಕೊಪ್ಪಳದಲ್ಲಿ ಜೂನ್ 27 ಕ್ಕೆ ಮನುಷ್ಯ ಮನಸ್ಸುಗಳನ್ನು ಪೋಣಿಸುವ ಸೌಹಾರ್ದ ನಡಿಗೆ,    ಕೊಪ್ಪಳ : ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಕರೆಯ ಮೇರೆಗೆ ಜೂನ್ 27 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಕೇಂದ್ರೀಯ ಬಸ್ ನಿಲ್ದಾಣ ಬಳಿಯ ಕನಕ ದಾಸ ವೃತ್ತ ದಿಂದ ಅಶೋಕ ವೃತ್ತದ ವರೆಗೆ ಸೌಹಾರ್ದ ನಡಿಗೆ ಕಾರ್ಯಕ್ರಮ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ಪೂರ್ವ ಭಾವಿ ಸಭೆಯಲ್ಲಿ ತೀರ್ಮಾನಿಸಿದರು.       ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಎಸ್.ಎಸ್.ಎಫ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಸಿರ್ ಸಖಾಫಿ ಪ್ರಸ್ತಾವಿಕವಾಗಿ ಮಾತನಾಡಿ ದೇಶದೆಲ್ಲೆಡೆ ಕೋಮುದ್ವೇಷ ಹರಡುವ ಕೆಲಸ ನಿರಂತರವಾಗಿ ಎಗ್ಗಿಲ್ಲದೆ ನಡೆಯುತ್ತಿದೆ. ಇತ್ತೀಚೆಗೆ ಕರ್ನಾಟಕದಲ್ಲಿ ಇದು ಮಿತಿಮೀರಿ ಹೋಗಿರುವುದು ನಾವು ಕಾಣುತ್ತಿದ್ದೇವೆ. ಈ ಸಂದರ್ಭದಲ್ಲಿ ನಾಡಿನ ಭಾವೈಕ್ಯತೆಯ ಪರಂಪರೆಯನ್ನು ಎತ್ತಿ ಹಿಡಿದು ಸೌಹಾರ್ದತೆಯ ಸಂದೇಶವನ್ನು ಸಾರುವ ಕಾರ್ಯಕ್ರಮಗಳು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಸ್ಪೂಡೆಂಟ್ಸ್ ಫೆಡರೇಷನ್ ರಾಜ್ಯದ ಇಪ್ಪತ್ತು ಪ್ರಮುಖ ಪಟ್ಟಣಗಳಲ್ಲಿ 'ಮನುಷ್ಯ ಮನಸ್ಸುಗಳನ್ನು ಪೋಣಿಸುವ' ಎಂಬ ಘೋಷ ವಾಕ್ಯದೊಂದಿಗೆ ಹಿಂದೂ.ಮುಸ್ಲಿಮ್.ಕ್ರೈಸ್ತ ಹಾಗೂ ಇನ್ನಿತರ ಜಾತಿ ಧರ್ಮಗಳ ನಾಯಕರನ್ನು ಸೇರಿಸಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಜಿಲ್ಲಾ ಕೇಂದ್ರ ಕೊಪ್ಪಳ ನಗರದಲ್ಲಿ 'ಸೌಹಾರ್ದ ನಡಿ...

ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ 450 ಹಾಸಿಗೆ ಬೋಧಕ ಆಸ್ಪತ್ರೆಯ ಉದ್ಘಾಟನೆಗೆ ಮತ್ತು ಎಂ.ಆರ್.ಐ.ಮಷಿನ್ ಮಂಜೂರಿಗೆ ಆಗ್ರಹಿಸಿ ಮನವಿ.

Image
ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ 450 ಹಾಸಿಗೆ ಬೋಧಕ ಆಸ್ಪತ್ರೆಯ ಉದ್ಘಾಟನೆಗೆ ಮತ್ತು ಎಂ.ಆರ್.ಐ.ಮಷಿನ್ ಮಂಜೂರಿಗೆ ಆಗ್ರಹಿಸಿ ಮನವಿ.   ಕೊಪ್ಪಳ : 450 ಹಾಸಿಗೆಗಳ ನೂತನ ಬೋಧಕ ಆಸ್ಪತ್ರೆಯ ಕಟ್ಟಡ ಶೀಘ್ರದಲ್ಲೇ ಉದ್ಘಾಟಿಸಿ.ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮತ್ತು ಜಿಲ್ಲಾ ಆಸ್ಪತ್ರೆಗೆ ತಲಾ ಒಂದು ಎಂಆರ್‌ಐ ಮಷಿನ್ ಗಳನ್ನು ಮಂಜೂರು ಮಾಡಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಸುರೇಶ್ ಬಿ ಇಟ್ನಾಳ ಮುಖಾಂತರ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ್ ಶೀಲವಂತರ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್. ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಗಾಳೆಪ್ಪ ಮುಂಗೋಲಿ ಮುಂತಾದವರು ಮನವಿ ಸಲ್ಲಿಸಿದರು. ಚಿನ್ನದ ಪದಕ ಪಡೆದ ವೈಟ್ ಲಿಫ್ಟರ್, ವಿಡಿಯೋ ನೋಡಲು ಇಲ್ಲಿ ಒತ್ತಿ,      ಮನವಿಯಲ್ಲಿ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೂತನ 450 ಹಾಸಿಗೆ ಬೋಧಕ ಆಸ್ಪತ್ರೆಯ  ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಅನಗತ್ಯ ವಿಳಂಬ ಮಾಡದೆ ಶೀಘ್ರದಲ್ಲೇ ಉದ್ಘಾಟಿಸಿ ಸೇವೆಗೆ ಅವಕಾಶ ಮಾಡಿಕೊಡಬೇಕು. ದರೋಡೆಕೋರ ಚಂದ್ರನ್‌ ವಿಡಿಯೋ ನೋಡಲು ಇಲ್ಲಿ ಒತ್ತಿ,       ಕೊಪ್ಪಳ ನಗರದ ಜಿಲ್ಲಾ ಆಸ್ಪತ್ರೆಗೆ ಕಳೆದ ಅವಧಿಯಲ್ಲಿ ತಾವು ಮುಖ್ಯಮಂತ್ರಿ ಇದ್ದಾಗ ನಮ್ಮ ಸಂಘಟನೆಯಿಂದ ಸಲ್ಲ...

ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿ ವಿಸ್ತರಣೆ,

Image
  15:05:2025 ಅನಧಿಕೃತ ಕಟ್ಟಡ, ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿ ವಿಸ್ತರಣೆ, ಬೆಂಗಳೂರು : ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ 'ಬಿ'-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಿ-ಖಾತಾ ನೀಡಿ ಸಕ್ರಮಗೊಳಿಸುವ ನಿರ್ಧಾರ ಕೈಗೊಂಡಿತ್ತು ಎಂದರು. ಕೊಪ್ಪ ಸರ್ಕಾರಿ ಆಸ್ಪತ್ರೆಯೊಳಗೆ ಮಳೆ ನೀರು, ಇದರನ್ವಯ ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಮೇ 10ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು ಎಂದು ಅವರು ಹೇಳಿದರು. ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು/ಮನೆಗಳು/...

ಕೊಪ್ಪ, ಶಾಲೆಯ ಮಕ್ಕಳನ್ನ ಅಟೋ ಚಾಲಕರ ಸೀಟಿನಿಂದ ಇಳಿಸಿದ ಪಿ ಎಸ್ ಐ ಬಸವರಾಜ್, ಚಾಲಕರಿಗೆ ಎಚ್ಚರಿಕೆ

Image
  14.06.2025  ಕೊಪ್ಪ:- ಕೊಪ್ಪ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳನ್ನು ಆಟೋಗಳ ಡ್ರೈವರ್ ಸೀಟಿನಲ್ಲಿ ಕೂರಿಸಿಕೊಂಡು ಹೋಗುವುದನ್ನು ಗಮನಿಸಿದ ಕೊಪ್ಪ ಠಾಣೆಯ ಪಿ ಎಸ್ ಐ ಬಸವರಾಜ್, ಮಕ್ಕಳನ್ನು ಡ್ರೈವರ್ ಸೀಟಿನಿಂದ ಇಳಿಸಿ ಹಿಂಬದಿ ಸೀಟಿನಲ್ಲಿ ಕೂರಿಸಿ ಆಟೋ ಚಾಲಕರಿಗೆ ಸುರಕ್ಷತೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಸೂಕ್ತ ತಿಳುವಳಿಕೆ ನೀಡಿದ್ದು, ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುತ್ತಾರೆ, ಈ ಬಗ್ಗೆ ಪಿಎಸ್ಐ ಬಸವರಾಜ್ ರವರ ಕಾರ್ಯ ಮೆಚ್ಚಿ ಸಾರ್ವಜನಿಕರು ಪ್ರಶಂಶಿಸಿರುತ್ತಾರೆ. ವಿಡಿಯೋ ನೋಡಲು ಇಲ್ಲಿ ಒತ್ತಿ, ವರದಿ,ಮಜೀದ್ ಸಣ್ಣಕೆರೆ ವಿಮಾನ ಅಪಘಾತ

ಕೊಪ್ಪ,ಮಲೆನಾಡಿನಲ್ಲಿ ಮುಗಿಲು ಮುಟ್ಟಿದ ಮುಸ್ಲಿಂ ಸಂಯುಕ್ತ ಜಮಾಅತ್ ಒಕ್ಕೂಟದ ಪ್ರತಿಭಟನೆ,

Image
  ಕೊಪ್ಪ,ಮಲೆನಾಡಿನಲ್ಲಿ ಮುಗಿಲು ಮುಟ್ಟಿದ ಮುಸ್ಲಿಂ ಸಂಯುಕ್ತ ಜಮಾಅತ್ ಒಕ್ಕೂಟದ ಪ್ರತಿಭಟನೆ, 11-05-2025, ಬುಧವಾರದಂದು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ,ಕೊಪ್ಪ ತಾಲ್ಲೂಕಿನ ಮುಸ್ಲಿಂ ಸಂಯುಕ್ತ ಜಮಾಅತ್ ಒಕ್ಕೂಟವು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಗೆ ಹಲವಾರು ಮಂದಿ ಆಗಮಿಸಿದ್ದರು, ಸಯ್ಯದ್ ಎಜಾಝ್ ಅಹ್ಮದ್ ರವರು ಅಧ್ಯಕ್ಷತೆಯನ್ನು ವಹಿಸಿದ್ದ ಪ್ರತಿಭಟನಾ ಸಭೆಯನ್ನು, ರಾಘವೇಂದ್ರ ನಗರದ ಮುಖ್ಯ ಧರ್ಮ ಗುರು ಸದ್ದಾಂ ಫೈಝಿ ಅಲ್ ಬುರ್ಹಾನಿಯವರ ಕುರ್ಆನ್ ಪಠಣ,ಕೊಪ್ಪ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಮುಖ್ಯ ಧರ್ಮ ಗುರು ಹನೀಫ್ ಖಾಸಿಮಿರವರ ಪ್ರಾರ್ಥನೆ ಹಾಗೂ ಕೆ.ಡಿ.ಪಿ ಸದಸ್ಯರಾದ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಮುಹಮ್ಮದ್ ಸಾದಿಕ್ ನಾರ್ವೆ ಯವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭಿಸಲಾಯಿತು, ಪ್ರತಿಭಟನೆಗೆ ಆಗಮಿಸಿದ್ದ ಮುಖ್ಯ ಪ್ರಭಾಷಣಕಾರರಾದ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು-ರವರು, ಮುಸಲ್ಮಾನರ ಇತಿಹಾಸ ಹಾಗೂ ವಕ್ಫ್ ನ ಮಹತ್ವವನ್ನು ತಿಳಿಸುವುದರ ಮೂಲಕ,ವಕ್ಫ್ ಕಾಯ್ದೆಯ ಕುರಿತು ಪ್ರತಿಯೊಬ್ಬ ಮುಸಲ್ಮಾನನಿಗಿರುವ ವಿರೋಧವನ್ನು ವ್ಯಕ್ತಪಡಿಸಿದರು, ವಿಡಿಯೋ ನೋಡಲು ಇಲ್ಲಿ ಒತ್ತಿ, ಪ್ರತಿಭಟನಾ ಸಭೆಯಲ್ಲಿ ಹಾಜರಿದ್ದ ಖ್ಯಾತ ವಕೀಲರಾದ ಸುಧೀರ್ ಕುಮಾರ್ ಮುರೋಳ್ಳಿ ಯವರು,ಅಂದು ನಡೆಯಬೇಕಿದ್ದ ಮೌನ ಮೆರವಣಿಗೆಗೆ ತಡೆಯೊಡ್ಡಿದ ಪೊಲೀಸ್ ಅಧಿಕಾರಿಗಳ ನಡೆಯನ್ನು ಖಂಡಿಸುವ ಮೂಲಕ ಪ್ರಾರಂಬಿಸಿ, ಧರ್ಮವೊಂದನ್ನು ಗು...

250ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,!

Image
  242ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಪತನ,! ನವದೆಹಲಿ:250 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್  ಡ್ರೀಮ್‌ಲೈನರ್ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ. ವಿಮಾನ ಲಂಡನ್‌ಗೆ ಹೋಗುತ್ತಿತ್ತು. ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ವಿಮಾನ ಪತನಗೊಂಡಿತು. ಸ್ಥಳದ ದೃಶ್ಯಗಳು ನೆಲದಿಂದ ದಟ್ಟವಾದ ಬೂದು ಹೊಗೆ ಮೇಲೇರುತ್ತಿರುವುದನ್ನು ತೋರಿಸುತ್ತವೆ. ಕನಿಷ್ಠ ಎರಡು ಡಜನ್ ಆಂಬ್ಯುಲೆನ್ಸ್‌ಗಳು ಬಂದಿವೆ ಮತ್ತು ಕೆಲವು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ, ಮೃತರ ಪಟ್ಟಿ ಬಿಡುಗಡೆ ಮಾಡಿದ ಏರ್ ಇಂಡಿಯಾ,